ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ, ಎರಡು ಸಾವಿರಕ್ಕೂ ಅಧಿಕ ಭಕ್ತಾದಿಗಳ ಉಪಸ್ಥಿತಿ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ.29ರಂದು ಸಂಭ್ರಮದಿಂದ ಜರುಗಿದ್ದು, ಮಧ್ಯಾಹ್ನ ಸುಮಾರು ಎರಡು ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ಅನ್ನಪ್ರಸಾದ ಸ್ವೀಕರಿಸಿದರು.

ಬೆಳಿಗ್ಗೆ 9ರಿಂದ ಶ್ರೀ ಗಣಪತಿ ಹೋಮ, ನವಕ ಪೂಜೆ, ಪಂಚಾಮೃತ ಅಭಿಷೇಕ, ನವಕಾಶಭಿಷೇಕ ಜರುಗಿತು. ಪೂರ್ವಾಹ್ನ 10.30ರಿಂದ ಚಂಪಾಷಷ್ಠಿ ಪ್ರಯುಕ್ತ ವಿಶೇಷ ಭಜನೆ, ಮಧ್ಯಾಹ್ನ 12.30ರಿಂದ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.


ರಾತ್ರಿ 7ರಿಂದ ದೀಪಾರಾಧನೆ ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿಯ ಸದಸ್ಯರುಗಳು, ವಿವಿಧ ಬೈಲುವಾರು ಸಮಿತಿಯ ಸಂಚಾಲಕರುಗಳು, ಸದಸ್ಯರುಗಳು ಸೇರಿದಂತೆ ಊರ – ಪರವೂರ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.