ಐವರ್ನಾಡು : ಸಮಗ್ರ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ವಿವಿಧ ಸ್ಪರ್ಧೆ ಗಳು ಮತ್ತು ಲಿಂಗತ್ವದ ಬಗ್ಗೆ ತರಬೇತಿ

0

ಸಮಗ್ರ ಸಂಜೀವಿನಿ ಒಕ್ಕೂಟ ಐವರ್ನಾಡು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಂಜೀವಿನಿ ಸಂಘದ ಸದಸ್ಯರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಲಾಯಿತು.
ಬಿ.ಆರ್.ಪಿ.ನಂದಿನಿಯವರು ಲಿಂಗತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.


ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಬಳಿಕ ಸ್ಪರ್ಧೆಯಲ್ಲಿ ವಿಜೇತ ರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಒಕ್ಕೂಟದ ಅಧ್ಯಕ್ಷರು ಮತ್ತು ಒಕ್ಕೂಟದ ಕಾರ್ಯದರ್ಶಿ ಸಂಘದ ಸದಸ್ಯರು ಮತ್ತು ಎಂ.ಬಿ.ಕೆ, ಎಲ್.ಸಿ.ಆರ್.ಪಿ. ಹಾಜರಿದ್ದರು.