ಸುಳ್ಯ ತಾಲೂಕು ಬ್ಯಾಹ್ಮಣ ಸಂಘದ ಮಹಾಸಭೆ- ನೂತನ ಪದಾಧಿಕಾರಿಗಳ ಆಯ್ಕೆ

0

ಸುಳ್ಯ ತಾಲೂಕು ಬ್ರಾಹ್ಮಣ ಸಂಘದ 48 ನೇ ವರ್ಷದ ವಾರ್ಷಿಕ ಮಹಾಸಭೆಯು ಬಾಲಕೃಷ್ಣ ಭಟ್ ಕೊಡೆಂಕಿರಿ ಯವರ ಅಧ್ಯಕ್ಷತೆಯಲ್ಲಿ ಡಿ.3 ರಂದು ವಿದ್ಯಾರ್ಥಿ ಸಭಾಭವನದಲ್ಲಿ ನಡೆಯಿತು.
ಸಭೆಯ ಆರಂಭದಲ್ಲಿ ಅಗಲಿದ ಸಂಘದ ಸದಸ್ಯರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.


ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಕೃಷ್ಣ ರಾವ್ ಇಂಜಿನಿಯರ್ ವಾಚಿಸಿದರು. ಕೋಶಾಧಿಕಾರಿ ಭಾಸ್ಕರ ರಾವ್ ಬಯಂಬು ಲೆಕ್ಕ ಪತ್ರ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ, ಗಣೇಶ್ ಶರ್ಮ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 2021-22 ನೇ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು.