ಹರಿಹರ :ಕ್ಯಾಲಂಡರ್ ಬಿಡುಗಡೆ, ದೇಣಿಗೆ ಹಸ್ತಾಂತರ

0

ಕೊಲ್ಲಮೊಗ್ರ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವತಿಯಿಂದ 2023 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ. 25ರಂದು ನಡೆಯಿತು. ಬಾಳುಗೂಡಿನ ನಿವೃತ್ತ ಪೋಸ್ಟ್ ಮ್ಯಾನ್ ಬಾಲಣ್ಣ ಗೌಡ ಮತ್ತು ಸುಂದರ ಗೌಡ ಮುಚ್ಚಾರ ಅವರಿಂದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಇದೇ ಸಂದರ್ಭ ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನ ಇದರ ಅಭಿವೃದ್ಧಿಗೋಸ್ಕರ ಒಂದು ಲಕ್ಷ ದೇಣಿಗೆಯನ್ನು ಸೊಸೈಟಿ ವತಿಯಿಂದ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪರಿಯಂಬಿ ಅವರಿಗೆ ಹಸ್ತಾಂತರಿಸಲಾಯಿತು. ಸೊಸೈಟಿಯ ಅಧ್ಯಕ್ಷರು, ನಿರ್ದೇಶಕರುಗಳು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.