ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ರೂಪಾಯಿ ಹತ್ತು ಸಾವಿರ ಹಸ್ತಾಂತರ

0

ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಡಿಸೆಂಬರ್ 10 ರಂದು ನಡೆಯುವ 26ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ರೂಪಾಯಿ ಹತ್ತುಸಾವಿರ ಮೊತ್ತದ ಚೆಕ್ಕನ್ನು ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿಯವರು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ| ಉಮ್ಮರ್ ಬೀಜದಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್ ರವರಿಗೆ ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ತೆಕ್ಕಿಲ್ ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ಧನುರಾಜ್ ಊರುಪಂಜ, ಅಯ್ಯುಬ್ ಗೂನಡ್ಕ ಉಪಸ್ಥಿತರಿದ್ದರು.