ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಮೀಪ ವಾಲಸಿರಿ ಮಜಲಿಗೆ ಹೋಗುವ ರಸ್ತೆಯ ಬದಿ ಚರಂಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಡಿ.5 ರಂದು ನಡೆಯಿತು.
ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಗುದ್ದಲಿಪೂಜೆ ನೆರವೇರಿಸಿದರು. ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ವಾರ್ಡ್ ಸದಸ್ಯ ರಿಯಾಜ್ ಕಟ್ಟೆಕಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶೀಲಾ ಕುರುಂಜಿ, ಸದಸ್ಯರುಗಳಾದ ಎಂ.ವೆಂಕಪ್ಪ ಗೌಡ, ಪ್ರವಿತಾ ಪ್ರಶಾಂತ್, ನಾಮ ನಿರ್ದೇಶನ ಸದಸ್ಯ ಬೂಡು ರಾಧಾಕೃಷ್ಣ ರೈ, ಕೃಪಾಶಂಕರ್ ತುದಿಯಡ್ಕ ಮೊದಲಾದವರಿದ್ದರು.