ಕಾವಿನಮೂಲೆ ಪಾಟಾಜೆ ಗ್ರಾಮಸ್ಥರ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಿನಮೂಲೆ ಪಾಟಾಜೆ ಗ್ರಾಮಸ್ಥರು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಮತ್ತು ಪಂಚಾಯತ್ ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಯಿತು. ಮುಖ್ಯವಾಗಿ ತೀರಾ ಹದಗೆಟ್ಟ ಕಾವಿನಮೂಲೆ ಪಾಟಾಜೆ ರಸ್ತೆಗೆ ಮಂಜೂರುಗೊಂಡ ರೂ. 50.00 ಲಕ್ಷ ಮೊತ್ತದ ಕಾಮಗಾರಿಯನ್ನು 15 ದಿನದ ಒಳಗೆ ಪ್ರಾರಂಭಿಸುವಂತೆ ಮತ್ತು ಇತರ ಪಂಚಾಯತ್ ನಿಂದ ಮೀಸಲಿರಿಸಿದ ವಿವಿಧ ಅನುದಾದ ಕಾಮಗಾರಿಗಳನ್ನು ಪ್ರಾರಂಭಿಸುವ ಕುರಿತು ಚರ್ಚಿಸಲಾಯಿತು.ಸೂಕ್ತವಾಗಿ ಸ್ಪಂದಿಸಿದ ಅಧ್ಯಕ್ಷರು ಮತ್ತು ಸದಸ್ಯರು ಎಲ್ಲಾ ರೀತಿಯಲ್ಲಿ ಸಹಕರಿಸುವುದಾಗಿ ತಿಳಿಸಿದರು. ಮುಂದಿನ 15 ದಿನದ ಒಳಗೆ ಚರ್ಚಿತ ವಿಷಯಗಳಿಗೆ ಸಂಬಂಧಿಸಿದಂತೆ ಕಾದು ಮುಂದಿನ ನಿರ್ಧಾರಗಳನ್ನು ಕೈಗೊಳುವುದಾಗಿ ನಿರ್ಧರಿಸಲಾಯಿತು.