ವಿನೋಬನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ನ ಶಾಲಾ ಘಟಕ ಉದ್ಘಾಟನೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕದ ‘ ವಿನೋಬನಗರ ವಿವೇಕಾನಂದ ಶಾಲಾ ಘಟಕ ‘ದ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನಡೆಯಿತು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅಧ್ಯಕ್ಷತೆ ವಹಿಸಿದರು. ಸ್ಕೌಟ್ ಗೈಡ್ ತಾಲೂಕಿನ ಕಾರ್ಯದರ್ಶಿ ಪ್ರೇಮಲತಾ ಎ. ಹೆಚ್.
ದೀಪ ಬೆಳಗಿಸಿ ಅಧಿಕೃತವಾಗಿ ಚಾಲನೆ ನೀಡಿ, ಸ್ಕೌಟ್ ಮತ್ತು ಗೈಡ್ಸ್ ನ ಧ್ಯೇಯ, ಉದ್ದೇಶ ಮತ್ತು ನಿಯಮಗಳ ಮಹತ್ವವನ್ನು ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿಯಾಗಿರುವ ಎನ್. ಗೋಪಾಲರಾವ್, ಪ್ರೌಢಶಾಲಾ ವಿಭಾಗದ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಹುಲಿಮನೆ, ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ. ಎಂ. ಸಿ.ಅಧ್ಯಕ್ಷೆ ಶ್ರೀಮತಿ ಸೌಮ್ಯ ಕದಿಕಡ್ಕ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯರಾದ ಜಯಪ್ರಸಾದ ಕಾರಿಂಜ, ಪ್ರೌಢಶಾಲೆ ಮುಖ್ಯೋಪಾಧ್ಯರಾದ ಗಿರೀಶ್ ಕುಮಾರ್. ಎ ಸಂಸ್ಥೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರುಗಳಾದ ಪೂರ್ಣಿಮಾ ಸ್ವಾಗತಿಸಿ ಅನನ್ಯ ವಂದಿಸಿದರು. ತೇಜೆಸ್ವಿ ಎಂ. ಕಾರ್ಯಕ್ರಮ ನಿರೂಪಿಸಿದರು.