ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ಸಹಕಾರ ರತ್ನ ಕೆ.ಸವಣೂರು ಸೀತಾರಾಮ ರೈ ಯವರಿಗೆ ಸನ್ಮಾನ

0

ಕಳೆದ 21 ವರ್ಷಗಳಿಂದ ವ್ಯವಹರಿಸುತ್ತಿರುವ ಸಹಕಾರಿ ಸಂಸ್ಥೆ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 5 ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಡಿ.8 ರಂದು ನಡೆಯಿತು.
ಸುಳ್ಯದ ಮುಖ್ಯ ರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್ ನಲ್ಲಿ ನೂತನ ಶಾಖೆಯನ್ನು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು.
ಬೆಳಗ್ಗೆ ಪುರೋಹಿತ ಶಿವಪ್ರಸಾದ್ ನಾಗಪಟ್ಟಣ ರವರು ಗಣಪತಿ ಹವನ ನೆರವೇರಿಸಿದರು.


ಬಳಿಕ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಉದ್ಘಾಟನಾ ಸಮಾರಂಭ ದ ಅಧ್ಯಕ್ಷತೆಯನ್ನು
ಪರಿವಾರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ ದೀಪ ಬೆಳಗಿಸಿದರು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ,
ಸಂಘದ ಉಪಾಧ್ಯಕ್ಷ ಕೆ.ಶಂಕರ ನಾಯ್ಕ್ , ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ ಪೆರಾಜೆ, ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಸುಳ್ಯ ತಾಲೂಕು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್. ರೈ ಬೆಳ್ಳಾರೆ, ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಮ್, ಉದ್ಯಮಿ ಲಯನ್ಸ್ ಕ್ಲಬ್ ಮಾಜಿ ಗವರ್ನರ್ ಲಯನ್ ಎಂ.ಬಿ .ಸದಾಶಿವ, ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎಂ. ಬಾಪೂ ಸಾಹೇಬ್, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುಧಾಕರ ಆಲೆಟ್ಟಿ, ಕಾಂಪ್ಲೆಕ್ಸ್ ಮಾಲಕ ಕೃಷ್ಣ ಕನ್ಸಲ್ಟಿಂಗ್ಸ್ ನ ಇಂಜಿನಿಯರ್ ಕೃಷ್ಣರಾವ್ ನಾವೂರು, ಪರಿವಾರ ಬಂಟರ ಸಂಘ ಸುಳ್ಯ ವಲಯದ ಅಧ್ಯಕ್ಷ ಪಿ.ಕೆ ವಿಠಲ ನಾಯ್ಕ್ ದೋಣಿ ಮೂಲೆ, ಸಲಹಾ ಸಮಿತಿ ಅಧ್ಯಕ್ಷ ಸತ್ಯಕುಮಾರ್ ಆಡಿಂಜ, ಸಂಘ ದ ಸಿ.ಇ.ಒ. ಸುಧಾಕರ ಕೆ.ಪಿ ಪುತ್ತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಸೀತಾರಾಮ ರೈ ಯವರನ್ನು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಪೇಟ ತೊಡಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಆಡಳಿತ ಮಂಡಳಿಯ ನಿರ್ದೇಶಕರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ನೂತನ ಠೇವಣಿ ಪತ್ರಗಳ ಬಿಡುಗಡೆ, ನೂತನ ಉಳಿತಾಯ ಖಾತೆಗಳ ಬಿಡುಗಡೆ, ಸಾಲ ಪತ್ರಗಳ ಬಿಡುಗಡೆಯನ್ನು ನೆರವೇರಿಸಲಾಯಿತು.
ಆಡಳಿತ ಮಂಡಳಿಯ ನಿರ್ದೇಶಕರುಗಳು, ಸಲಹಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

ನಿರ್ದೇಶಕ ಕೊಡಂಗೆ ಬಾಲಕೃಷ್ಣ ನಾಯ್ಕ್ ಪ್ರಾಸ್ತಾವಿಕ ಮಾತನಾಡಿದರು. ಕೆ.ಶಂಕರ ನಾಯ್ಕ್ ಸನ್ಮಾನ ಪತ್ರ ವಾಚಿಸಿದರು.
ಸಲಹಾ ಸಮಿತಿ ಕಾರ್ಯದರ್ಶಿ ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಿ.ಇ.ಒ ಸುಧಾಕರ ಕೆ.ಪಿ ವಂದಿಸಿದರು.
ಸುಳ್ಯ ಶಾಖೆಯ ಶುಭಾರಂಭದ ಪ್ರಯುಕ್ತ ಠೇವಣಿಗಳ ಮೇಲೆ ಡಿ. 31ರ ಒಳಗೆ ಒಂದು ವರ್ಷಕ್ಕೆ ಮೇಲ್ಪಟ್ಟ ಠೇವಣಿಗಳಿಗೆ ಶೇ 9% ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಶೇ. 9.5% ಬಡ್ಡಿ ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.