ಡಿ.14:ಅಡ್ಕಾರಿನಲ್ಲಿ ಧರ್ಮಸ್ಥಳ ಯೋಜನೆಯ ಕೇಂದ್ರ ಒಕ್ಕೂಟದ ಪದಗ್ರಹಣ- ನವಜೀವನ ಸದಸ್ಯರ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ

0

ಸುಳ್ಯ ತಾಲೂಕು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಗತಿ ಬಂಧು‌ ಸ್ವ ಸಹಾಯ ಸಂಘಗಳ ಒಕ್ಕೂಟ ಇದರ ಸಹಯೋಗದಲ್ಲಿ ಕೇಂದ್ರ ಒಕ್ಕೂಟದ ಪದಗ್ರಹಣ ,ನವಜೀವನ ಸದಸ್ಯರ ಸಮಾವೇಶ ಮತ್ತು ಒಕ್ಕೂಟಗಳ ಸಾಧನಾ ಸಮಾವೇಶವು ಅಡ್ಕಾರ್ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಡಿ.14 ರಂದುನಡೆಯಲಿರುವುದು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷಎನ್.ಎ.ರಾಮಚಂದ್ರರವರುವಹಿಸಲಿದ್ದಾರೆ.
ಧರ್ಮಸ್ಥಳ ಯೋಜನೆಯ ಬಿ.ಸಿ.ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಸಮಾರಂಭವನ್ನು ಉದ್ಘಾಟಿಸಿ ವಿವಿಧ ಅನುದಾನಗಳ ಸೌಲಭ್ಯವನ್ನು ಹಸ್ತಾಂತರ ಮಾಡಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ, ವಿವೇಕ್ ವಿನ್ಸೆಂಟ್ ಪಾಯಸ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ, ಯೋಜನೆಯ ಬಿ.ಸಿ.ಟ್ರಸ್ಟ್ ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಅಡ್ಕಾರ್ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ದೇವಸ್ಥಾನ ದ ಮೊಕ್ತೇಸರ ಗುರುರಾಜ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ,ಜನಜಾಗೃತಿ ವೇದಿಕೆಯ ಹಾಗೂ ಜಿಲ್ಲಾ ನಿರ್ದೇಶಕರು, ಯೋಜನಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ.