ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ ಮತ್ತು ಸಮ್ಮೇಳನ ಸ್ವಾಗತ ಸಮಿತಿ ನೇತೃತ್ವದಲ್ಲಿ ಗೂನಡ್ಕದಲ್ಲಿ ನಡೆದ ಸುಳ್ಯ ತಾಲೂಕು ೨೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ
ಗಾಯಕರಿಂದ ಕನ್ನಡ ಗೀತ ಗಾಯನ ನಡೆಯಿತು.
ಖ್ಯಾತ ಗಾಯಕ ಕೆ.ಆರ್. ಗೋಪಾಲಕೃಷ್ಣ ನೇತೃತ್ವದಲ್ಲಿ ಶಿವ ಪ್ರಸಾದ್ ಆಲೆಟ್ಟಿ, ತೇಜೇಶ್ ಕಲ್ಲುಗುಂಡಿ, ಮೇಘ ಕೃಷ್ಣ ಕಾಯರ್ತೋಡಿ, ಹಂಸಿಕಾ, ಮೌಲ್ಯ ಮತ್ತು ಅರಂತೋಡು ಎನ್ನೆಂಸಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸಿದರು. ಕಸಾಪ ನಿರ್ದೇಶಕ ರಮೇಶ್ ನೀರಬಿದಿರೆ ವಂದಿಸಿದರು.