ಬೆಳ್ಳಾರೆ ನವೀನ್ ಗೌಡ ಅಪಹರಣ ಪ್ರಕರಣಕ್ಕೆ ಮತ್ತೊಂದು ತಿರುವು, ಮನೆಯಿಂದ ಚಿನ್ನಾಭರಣ ಕಳವುವಾಗಿದೆಯೆಂದು ಸ್ಪಂದನ ನವೀನ್ ರವರಿಂದ ಅತ್ತೆ, ಮೈದುನರ ಮೇಲೆ ಪೊಲೀಸ್ ದೂರು

0

ಬೆಳ್ಳಾರೆಯ ಕಾವಿನಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಕಾಮಧೇನು ಮಾಧವ ಗೌಡರ ಸೊಸೆ ಸ್ಪಂದನ ನವೀನ್ ರವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.23 ರಂದು ನಡೆದಿದೆ.


ದೂರಿನಲ್ಲಿ ” ನನ್ನ ಗಂಡ ನವೀನ ಎಂ. ಅತಿಯಾದ ಮದ್ಯ ವ್ಯಸನಿಯಾಗಿದ್ದು ವೈವಾಹಿಕ ಜೀವನದಲ್ಲಿ ನೊಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು ಅಸಾಧ್ಯವಾದ ಹಂತಕ್ಕೆ ತಲುಪಿದ್ದು ಇವರ ತಂದೆ ಮಾಧವ ಗೌಡರವರು ಮದ್ಯ ವ್ಯಸನ ಮುಕ್ತ ಚಿಕಿತ್ಸೆಗಾಗಿ ಬೆಂಗಳೂರಿನ ಕಡಂಬಸ್ ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದ್ದರು. ಅದರಂತೆ ಇವರನ್ನು ಕಡಂಬಸ್ ಆಸ್ಪತ್ರೆಗೆ ದಾಖಲು ಮಾಡಿದ್ದು ಈ ಬಗ್ಗೆ ನೀರಜಾಕ್ಷಿಯವರು ಮಾಧವ ಗೌಡ, ದಿವ್ಯಪ್ರಭಾ, ಪರಶುರಾಮ, ಸ್ಪಂದನ, ಸ್ಪರ್ಶಿತ್ ಹಾಗೂ ನವೀನ ರೈ ಎಂಬವರ ಮೇಲೆ ಪೊಲೀಸ್ ದೂರು ಕೊಟ್ಟಿದ್ದು ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾವು ಜಾಮೀನು ಪಡೆದು ಮನೆಯ ಒಳಗೆ ಹೋಗಿ ನೋಡಿದಾಗ ಮನೆಯಿಂದ ಲಾಕರ್ ತೆಗೆದಿದ್ದು ಅದರ ಒಳಗಿದ್ದ ಚಿನ್ನಾಭರಣಗಳು, ವಜ್ರದ ಹಾರ,ನೆಕ್ಲೆಸ್, ಉಂಗುರ, ಕಿವಿಯ ಓಲೆಗಳು, ಕರಿಮಣಿ ತಾಳಿ ಚೈನು ಹಾಗೂ ಇತರ ಚಿನ್ನಾಭರಣಗಳು ಮತ್ತು ರಶೀದಿಗಳು ಕಳವಾಗಿರುತ್ತದೆ. ಈ ಚಿನ್ನಾಭರಣಗಳನ್ನು ನೀರಜಾಕ್ಷಿ, ತಾರಾ ಕುಮಾರಿ, ವಿನ್ಯಾಸ್, ಪ್ರಜ್ಞಾ ಎಂಬವರು ಕಳ್ಳತನ ಮಾಡಿರುವುದಾಗಿ ಬಲವಾದ ಸಂಶಯವಿದ್ದು ಆರೋಪಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ” ಎಂದು ಸ್ಪಂದನಾ ತಿಳಿಸಿದ್ದಾರೆ.


ಈ ಬಗ್ಗೆ ಠಾಣೆಯಲ್ಲಿ ನೀರಜಾಕ್ಷಿ,ತಾರಾಕುಮಾರಿ,ವಿನ್ಯಾಸ್,ಪ್ರಜ್ಞರವರ ಮೇಲೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.