ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ದಂಡ, ತ್ಯಾಜ್ಯ ಎಸೆದವರಿಂದಲೆ ವಿಲೇವಾರಿ ಮಾಡಿಸಿದ ಪಂಚಾಯತ್

0

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಎಡಮಂಗಲ ನಿವಾಸಿಗಳಿಗೆ ರೂ 2000.00 ದಂಡ ವಿಧಿಸಿದ ಘಟನೆ ಡಿ.,23 ರಂದು ನಡೆದಿದೆ.
ಡಿ.12 ರಂದು ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ದಿನಾಂಕ 12/10/2022 ರಂದು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿ ಸಿ ಕ್ಯಾಮರ ದೃಶ್ಯ ಪರಿಶೀಲಿಸಿ ಹಾಗೂ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿ ತ್ಯಾಜ್ಯದ ಪುರಾವೆಗೆ ಸಂಬಂಧಿಸಿದವರು ನಿರಾಕರಿಸಿದ ನೆಲೆಯಲ್ಲಿ
ಬೆಳ್ಳಾರೆ ಆರಕ್ಷಕ ಠಾಣಾಧಿಕಾರಿಗಳ ಸಹಕಾರದೊಂದಿಗೆ ತ್ಯಾಜ್ಯ ಬಿಸಾಡಿದ ಎಡಮಂಗಲದ ಯುವಕನನ್ನು ಪತ್ತೆ ಹಚ್ಚಿ ರೂ 2000.00 ದಂಡ ವಿಧಿಸಲಾಯಿತು.ಬಳಿಕ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತೆಂದು ತಿಳಿದು ಬಂದಿದೆ.