ಬೆಳಂದೂರು – ಅಕ್ರಮ ತಳ್ಳುಗಾಡಿ ತೆರವು : ಇಓ ನವೀನ್ ಭಂಡಾರಿ ಮತ್ತು ಪಿಡಿಓಗೆ ಜೀವ ಬೆದರಿಕೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ, ಕೊಲೆ ಬೆದರಿಕೆ ಪ್ರಕರಣ ದಾಖಲು

0

ಬೆಳಂದೂರು ಗ್ರಾಮ ಪಂಚಾಯತ್ ‌ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿನ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಕುಮಾರ್ ಭಂಡಾರಿ ಮತ್ತು ಗ್ರಾ.ಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ ಕೆ. ಅವರಿಗೆ ವಾಟ್ಸ್ಆ್ಯಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ, ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.