ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0


ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆ ರೂಮಿನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಮ್ ಗೆ ಹೋದಾಗ ಬಾಗಿಲು ಹಾಕಿತ್ತು,

ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ, ಆಕೆ ಸೋನಿಯ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ತಿಳಿಸಿದ್ದು,ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ, ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್, ಮೊದಲಾದವರು ಆಗಮಿಸಿದ್ದು ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ. ಈಕೆ ತಾಯಿ ರೀನಾರನ್ನು ಅಗಲಿದ್ದಾರೆ.