ಪ್ರತ್ಯೇಕ ಘಟನೆಗೆ ಸಂಬಂಧಿಸಿ ಕಾಣೆಯಾಗಿದ್ದ ಇಬ್ಬರು ಮಹಿಳೆಯರನ್ನು ಪತ್ತೆ ಹಚ್ಚಿದ ಸುಳ್ಯ ಪೊಲೀಸರು

0
(ಮಹಾಲಕ್ಷ್ಮಿ)

ಕಳೆದ ಕೆಲವು ತಿಂಗಳ ಹಿಂದೆ ಪ್ರತ್ಯೇಕ ಘಟನೆಗೆ ಸಂಬಂಧಿಸಿದ ಕಾಣೆಯಾಗಿದ್ದ ಸಂಪಾಜೆ ಮೂಲದ ಇಬ್ಬರು ಮಹಿಳೆಯರನ್ನು ಪತ್ತೆಹಚ್ಚುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಅವರ ಮನೆಯವರು ದೂರನ್ನು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಮಹಿಳೆಯರನ್ನು ಪತ್ತೆ ಹಚ್ಚಲು ಜಿಲ್ಲೆಯ ಮತ್ತು ರಾಜ್ಯದ ಬೇರೆ ಬೇರೆ ಕಡೆಗಳಿಂದ ಅವರ ಮಾಹಿತಿಯನ್ನು ಸಂಗ್ರಹಿಸಿ ಕಾರ್ಯಾಚರಣೆ ಆರಂಭಿಸಿದ್ದರು.
ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿರುವ ಸುಳ್ಯ ಪೊಲೀಸರು ಮಹಾಲಕ್ಷ್ಮಿ ಎಂಬುವವರನ್ನು ಬೆಳ್ತಂಗಡಿ ಪರಿಸರದಲ್ಲಿ ಪತ್ತೆ ಹಚ್ಚಿದರೆ, ನಾಗವೇಣಿಯನ್ನು ಮಹಾರಾಷ್ಟ್ರದ ಪೂಣೆಯಲ್ಲಿ ಪತ್ತೆ ಹಚ್ಚಿದ್ದಾರೆ.
ಮಹಾಲಕ್ಷ್ಮಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿ ರಬ್ಬರ್ ಟೇಪಿಂಗ್ ಕೆಲಸಕ್ಕೆ ಸೇರಿಕೊಂಡು ಅಲ್ಲಿರುವ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಆಕೆಯನ್ನು ಸುಳ್ಯ ಠಾಣೆಗೆ ಕರೆತಂದು ಮನೆಯವರನ್ನು ಕರೆಸಿ ಮಾತುಕತೆ ನಡೆಸಿ ಅವರೊಂದಿಗೆ ಕಳುಹಿಸಿಕೊಟ್ಟಿರುತ್ತಾರೆ.

ನಾಗವೇಣಿ

ನಾಗವೇಣಿ ಎಂಬ ಮಹಿಳೆ ತನ್ನ ಪ್ರಿಯಕರೊಂದಿಗೆ ಮಹಾರಾಷ್ಟ್ರದ ಪೂಣೆಯಲ್ಲಿ ಇರುವ ಮಾಹಿತಿ ಸಂಗ್ರಹಿಸಿದ ಸುಳ್ಯ ಪೊಲೀಸರು ಆಕೆಯ ಪತಿಯನ್ನು ಮಹಿಳೆ ಇರುವ ಸ್ಥಳಕ್ಕೆ ತಮ್ಮೊಂದಿಗೆ ಕರೆದೋಯ್ದು ವಿಚಾರಿಸಿದಾಗ ಆಕೆ ತನ್ನ ಪತಿಯೊಂದಿಗೆ ಬರಲು ನಿರಾಕರಿಸಿದ್ದು ಪ್ರಿಯಕರೊಂದಿಗೆ ಅಲ್ಲೇ ಇರುವುದಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಅವರಿಬ್ಬರ ಹೇಳಿಕೆಗಳನ್ನು ಪಡೆದು ಬಂದಿರುವುದಾಗಿ ತಿಳಿದು ಬಂದಿದೆ.

ಈ ಮಹಿಳೆಯರ ಪತ್ತೆಗಾಗಿ ನಡೆಸಿದ ಕಾರ್ಯಚರಣೆಯಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.