ನಾಳೆ ಗುತ್ತಿಗಾರು ಶ್ರೀ ಅಯ್ಯಪ್ಪ ಸೇವಾ ಸಮಿತಿ ಆಶ್ರಯದಲ್ಲಿ ಶನಿಪೂಜೆ ಹಾಗೂ ನಾಟಕ ಪ್ರದರ್ಶನ

0

ಶ್ರೀ ಅಯ್ಯಪ್ಪ ಸೇವಾ ಸಮಿತಿ ಗುತ್ತಿಗಾರು ಇದರ ಆಶ್ರಯದಲ್ಲಿ
ಡಿ.30 ರಂದು ಗಣಪತಿ ಹೋಮ ಹಾಗೂ ಸಾಮೂಹಿಕ ಶನಿಪೂಜೆ ನಡೆಯಲಿದೆ. ಕಾರ್ಯಕ್ರಮವು ಶ್ರೀ ಕೃಷ್ಣಾಭಜನಾ ಮಂದಿರದ ವಠಾರದಲ್ಲಿ ಜರುಗಲಿದ್ದು ಪೂರ್ವಹ್ನ
ಗಣಪತಿ ಹೋಮ ಹಾಗೂ ಸಾಮೂಹಿಕ ಶನಿಪೂಜೆ
ಜರಗಲಿರುವುದು.
ಸಂಜೆ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು ಪ್ರಜ್ವಲ್ ಪೊಯ್ಯಮಜಲು ಉಪನ್ಯಾಸ ನೀಡಲಿದ್ದಾರೆ. ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಕಂದ್ರಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದು. ಅತಿಥಿಗಳಾಗಿ ಮೋಹನ್ ರಾಂ ಸುಳ್ಳಿ, ನಿತ್ಯಾನಂದ ಮುಂಡೋಡಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ಸುಧಾಕರ ರೈ, ರವಿ ಕಕ್ಕೆಪದವು ಮತ್ತಿತರರು ಭಾಗವಹಿಸಲಿದ್ದಾರೆ. ಸಭೆಯ ಬಳಿಕ ವಿಜಯಕುಮಾರ್ ಕೊಡಿಯಾಲ್ ಬೈಲ್ ರಚಿಸಿ ನಿರ್ದೇಶಿಸಿರುವ ಮಣಿಕಂಠ ಮಹಿಮೆ ನಾಟಕ ಪ್ರದರ್ಶನ ನಡೆಯಲಿದೆ.