ಅಯ್ಯನಕಟ್ಟೆ ಜಾತ್ರೋತ್ಸವದ ಬಗ್ಗೆ 3ನೇ ಪೂರ್ವಭಾವಿ ಸಭೆ

0

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ನೇಮೋತ್ಸವ ಜ. 26ರಿಂದ ಜರಗಲಿದ್ದು, ಈ ಬಗ್ಗೆ 3ನೇ ಪೂರ್ವಭಾವಿ ಸಭೆ ಡಿ. 29ರಂದು ಮೂರು ಕಲ್ಲಡ್ಕ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದ ಸನ್ನಿಧಿಯಲ್ಲಿ ನಡೆಯಿತು.

ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, 2023ರ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಗೌರವಾಧ್ಯಕ್ಷ ರಾಂ ಪ್ರಸಾದ್ ಕಾಂಚೋಡು , ಕಾರ್ಯಾಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ವಿಶ್ವಸ್ಥರಾದ ವೆಂಕಟ್ರಮಣ ಗೌಡ ತಂಟೆಪ್ಪಾಡಿ ಮತ್ತು ಗೌರವ ಸಲಹೆಗಾರರಾದ ಕಾಂಚೋಡು ಪರಮೇಶ್ವರಯ್ಯ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಕಿಲಂಗೋಡಿ ಸ್ವಾಗತಿಸಿದರು. ಗೌರವ ಸಲಹೆಗಾರರಾದ ಸುಧಾಕರ ರೈ ಎ.ಎಂ. ಪ್ರಾಸ್ತಾವಿಕ ಮಾತುಗಳೊಂದಿಗೆ ಆಮಂತ್ರಣ ಪತ್ರಿಕೆಯ ಕರಡು ಪ್ರತಿಯನ್ನು ಸಭೆಯಲ್ಲಿ ಓದಿದರು. ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸಮಿತಿಯ ಗೌರವ ಸಲಹೆಗಾರರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.