ಸುಬ್ರಹ್ಮಣ್ಯದ ಅಜಿತೇಶ್ ಪಿ. ಎಸ್. ಭೂಸೇನೆಯ ಲೆಫ್ಟಿನೆಂಟ್ ಆಫೀಸರ್ ಹುದ್ದೆಗೆ ಆಯ್ಕೆ

0

ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಆಫೀಸರ್ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.

ಪ್ರಸ್ತುತ ಡೆಹ್ರಾಡೂನ್‌ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್‌ಸ್ಟಿಟ್ಯೂಟ್‌ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಅಜಿತೇಶ್ ಇಂಡಿಯನ್ ಆರ್ಮಿಯ ಆಫೀಸರ್ ಟ್ರೈನಿಂಗ್ ಅಕಾಡೆಮಿ ಚೆನ್ನೈಯಲ್ಲಿ ಒಂದು ವರ್ಷ ಕಾಲ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶ್ರೀಕೃಷ್ಣ ಶರ್ಮ ಪಿ. ಇವರ ಪುತ್ರರಾದ ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.