ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಪ್ರಾರಂಭ – ಉಗ್ರಾಣ ಮುಹೂರ್ತ

0

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.03 ರಂದು ವರ್ಷಾವಧಿ ಜಾತ್ರೋತ್ಸವವು ಪ್ರಾರಂಭಗೊಂಡಿತು. ಜ.12 ರವರೆಗೆ ವರ್ಷಾವಧಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.
ಉಗ್ರಾಣ ಮುಹೂರ್ತವು ಜ.03 ರಂದು ನಡೆಯಿತು.

ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆದ ಬಳಿಕ ಉಗ್ರಾಣ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ,ಶ್ರೀಮತಿ ಎಂ.ಮೀನಾಕ್ಷಿ ಗೌಡ,ಎ.ರಮೇಶ ಬೈಪಡಿತ್ತಾಯ, ಎನ್.ಜಯಪ್ರಕಾಶ್ ರೈ ಹಾಗೂ ಕೃಪಾಶಂಕರ ತುದಿಯಡ್ಕ, ಶ್ರೀಮತಿ ಶಶಿಕಲಾ ಹರಪ್ರಸಾದ್, ವೀರಕೇಸರಿ ಕರಣಿಕರು, ಕಮಲಾಕ್ಷಿ ಟೀಚರ್,ಡಾ.ಎನ್.ಎ.ಜ್ಞಾನೇಶ್ , ಡಾ‌.ಸಾಯಿಗೀತಾ,ವಸಂತ ಭಟ್ ದ್ವಾರಕ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.