ಸುಳ್ಯ ಜಾತ್ರೆ ಸಂತೆ ಮುಕ್ತ ಅವಕಾಶ ನೀಡಿದ್ದನ್ನು ರದ್ದುಗೊಳಿಸಲು ಮನವಿ ಹಿನ್ನಲೆ

0

ಸಂಜೆ 6 ಗಂಟೆಗೆ ಚೆನ್ನಕೇಶವ ದೇವಸ್ಥಾನದಲ್ಲಿ ತುರ್ತು ಸಭೆ ಕರೆದ ದೇವಸ್ಥಾನ ಸಮಿತಿ

ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವ ದೇವಸ್ಥಾನದ ನಿರ್ಣಯವನ್ನು ರದ್ದುಗೊಳಿಸಬೇಕೆಂದು ಬಿಜೆಪಿ‌ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ‌ಕಂಜಿಪಿಲಿ ನೇತೃತ್ವದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ರಿಗೆ ಮನವಿ ನೀಡಿದ ಹಿನ್ನಲೆಯಲ್ಲಿ ಇಂದು ಸಂಜೆ 6 ಗಂಟೆಗೆ ತುರ್ತು ಸಭೆ ನಡೆಸಿ ಚರ್ಚೆ ನಡೆಸುವ ಕುರಿತು ಡಾ. ಚಿದಾನಂದರು, ಹರೀಶ್ ಕಂಜಿಪಿಲಿ ನೇತೃತ್ವದ ಹಿಂದೂ ಸಂಘಟನೆ ಪದಾಧಿಕಾರಿಗಳಿಗೆ ಹೇಳಿರುವುದಾಗಿ ತಿಳಿದು ಬಂದಿದೆ. ಹಾಗೂ ಈ ಸಭೆಗೆ ಎಲ್ಲರನ್ನು ಕೂಡಾ ಆಹ್ವಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.