ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪೊಲೀಸ್ ದೂರು
ವಿದ್ಯಾರ್ಥಿನಿಯಾಗಿರುವ ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದಾನೆಂದು ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ.
ಕುಕ್ಕೆ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಕಂಡು ಬಂದ ಇವರು, ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ.
ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.