ಕೆ.ವಿ.ಜಿ. ಪಾಲಿಟೆಕ್ನಿಕ್ ; ವಾರ್ಷಿಕ ಕ್ರೀಡಾಕೂಟ

0


ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2022-23 ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವು ಕೆ.ವಿ.ಜಿ ಆಟದ ಮೈದಾನದಲ್ಲಿ ನಡೆಯಿತು.


ನಗರ ಪಂಚಾಯತ್ ನ ಮಾಜಿ ಅಧ್ಯಕ್ಷ ಎನ್ಎ ರಾಮಚಂದ್ರ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಯು ಸಹಕಾರಿಯಾಗಿದೆ. ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಿರುವ ವ್ಯಕ್ತಿಗಳ ನಿರ್ಮಾಣವಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆಯು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಲಿಖಿತ್ ಎಸ್.ಆರ್ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್, ಕ್ರೀಡಾ ಸಂಯೋಜಕರಾದ ಪ್ರದೀಪ್ ಎಂ ಹಾಗೂ ಕುಶಾಲಪ್ಪ ಪಿ.ಆರ್, ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಸುನಿಲ್ ಕುಮಾರ್ ಎನ್.ಪಿ ಮತ್ತು ಪ್ರಮೋದ್ ಬಿ.ಡಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಆರಂಭದಲ್ಲಿ ಎನ್.ಎಸ್.ಎಸ್.ಸ್ವಯಂ ಸೇವಕರ ಬ್ಯಾಂಡ್ ಸೆಟ್ ನೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು. ಕೆ.ವಿ.ಜಿ.ಡೆಂಟಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ ಬೆಲೆಗದ್ದೆ ಹಾಗೂ ಕೆ.ವಿ.ಜಿ.ಐ.ಪಿ.ಎಸ್ ನ ದೈಹಿಕ ಶಿಕ್ಷಣ ನಿರ್ದೇಶಕ ತೀರ್ಥವರ್ಣ ಕ್ರೀಡಾ ಕೂಟ ನಡೆಸಿಕೊಟ್ಟರು. ಕ್ರೀಡಾ ಸಂಯೋಜಕ ಪ್ರದೀಪ್ ಎಂ ವಂದಿಸಿದರು. ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.