ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವಗಳ ಪ್ರತಿಷ್ಠಾ ಕಲಶ ಮತ್ತು ವಾರ್ಷಿಕ ಜಾತ್ರೋತ್ಸವ ವು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತವು ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಗೊನೆ ಮುಹೂರ್ತ ನೆರವೇರಿಸಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ .
ಪದ್ಮನಾಭ ಶೆಟ್ಟಿ , ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ , ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ ,ಶ್ರೀಮತಿ ಭಾಗ್ಯಲಕ್ಷ್ಮಿ ಹಾಗೂ ಅಮರನಾಥ ಶೆಟ್ಟಿ, ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ದೇವಸ್ಥಾನದ ವ್ಯ.ಸಮಿತಿ ಮಾಜಿ ಅಧ್ಯಕ್ಷರಾದ ನಿರಂಜನ ಶೆಟ್ಟಿ ಪಾಲ್ತಾಡು, ಉಮೇಶ್ ಕೆ
.ಎಂ.ಬಿ ಪೆರುವಾಜೆ , ದೇವಾಲಯದ ಸಿಬ್ಬಂದಿ ವಸಂತ ಆಚಾರ್ಯ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.