ಸುಳ್ಯ ಚೆನ್ನಕೇಶವ ದೇವರ ರಥೋತ್ಸವದ ಪ್ರಯುಕ್ತ ರಂಜಿಸಿದ ಮ್ಯೂಸಿಕಲ್ ನೈಟ್ -2023

0

ಸುಳ್ಯ ಶ್ರೀ ಚೆನ್ನಕೇಶವ ದೇವರ ರಥೋತ್ಸವದ ಪ್ರಯುಕ್ತ ವಾಷ್ಠರ್ ಫೈವ್ ಸ್ಟಾರ್ ಬಳಗ ಮತ್ತು ಸಪ್ತಸ್ವರ ಮೆಲೋಡೀಸ್ ಬಳಗದ ಆಶ್ರಯದಲ್ಲಿ ಮ್ಯೂಸಿಕಲ್ ನೈಟ್ 2023 ಅದ್ದೂರಿಯ ಸಂಗೀತ ರಸಮಂಜರಿ ಕಾರ್ಯಕ್ರಮ ಜ.11 ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ವಾಷ್ಠರ್ ಫೈವ್ ಸ್ಟಾರ್ ಬಳಗದ ಅಧ್ಯಕ್ಷ ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ,ನ್ಯಾಯವಾದಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ , ದೈವ ನರ್ತಕ ಜಯರಾಮ ಬೊಳಿಯಮಜಲು, ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ, ಸಪ್ತಸ್ವರ ಸಂಗೀತ ತರಬೇತಿ ಕೇಂದ್ರದ ಸಂಚಾಲಕ ಅರುಣ್ ಜಾದವ್ ಕೇರ್ಪಳ,
ನ್ಯಾಯವಾದಿ ಬಾಲಚಂದ್ರ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೈವ ನರ್ತಕ ಜಯರಾಮ ಬೊಳಿಯಮಜಲು ರವರನ್ನು ಸನ್ಮಾನಿಸಲಾಯಿತು. ಗಾಯಕಿ ಹರ್ಷಿತಾ ಪ್ರಾರ್ಥಿಸಿದರು. ಭೀಮರಾವ್ ವಾಷ್ಠರ್ ಸ್ವಾಗತಿಸಿದರು. ಅರುಣ್ ಜಾದವ್ ವಂದಿಸಿದರು.
ಬಳಿಕ ಕೇರಳ ಮತ್ತು ಕರ್ನಾಟಕ ರಾಜ್ಯದ ಪ್ರಸಿದ್ಧ ಕಲಾವಿದರು ಹಾಗೂ ಸ್ಥಳೀಯ ಕಲಾವಿದರಿಂದ ಅದ್ದೂರಿಯ ಸಂಗೀತ ರಸ ಮಂಜರಿ ಕಾರ್ಯಕ್ರಮ ಪ್ರದರ್ಶನಗೊಂಡಿತು.