ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಮತ್ತು ಉಪಾಧ್ಯಕ್ಷರಾಗಿ ಸುಧಾಕರ ಆಲೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಸಿ.ಡಿ.ಒ. ಶಿವಲಿಂಗಯ್ಯ ರವರು ಅದ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶ್ರೀಪತಿ ಭಟ್ ಮಜಿಗುಂಡಿ, ಜಯಪ್ರಕಾಶ್ ಕುಂಚಡ್ಕ, ಹರೀಶ್ ರಂಗತ್ತಮಲೆ, ತಂಗವೇಲು ನಾಗಪಟ್ಟಣ, ಗಂಗಾಧರ ಎನ್.ಎ, ಶ್ರೀಮತಿ ಶ್ರೀದೇವಿ ಭಟ್ ಮಜಿಗುಂಡಿ, ಶ್ರೀಮತಿ ವೇದಾವತಿ ಸಣ್ಣಯ್ಯ ಗೌಡ ಆಲೆಟ್ಟಿ ಹಾಗೂ ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸ್ಥಳೀಯರಾದ ಜಗದೀಶ್ ಸರಳಿಕುಂಜ, ಡಿ.ಸಿ.ಸಿ.ಬ್ಯಾಂಕಿನ ವಲಯ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನಕರ ಎ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.