ಕೆವಿಜಿ ಐಪಿಎಸ್ ನಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ

0


ಎಳ್ಳು- ಬೆಲ್ಲ ಕೊಟ್ಟು ಸಂಭ್ರಮ

ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಡಿ. 12 ರಂದು ಆಚರಿಸಲಾಯಿತು. ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಯ ಬಗ್ಗೆ ನಾಲ್ಕನೇ ತರಗತಿಯ ವಿಹಾನ್, ದ್ವಿತ ಮತ್ತು ಇಶಾನ್ ಬಿ.ಎ ತಿಳಿಸಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಮತ್ತು ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಇವರಿಗೆ ಎಳ್ಳು ಬೆಲ್ಲವನ್ನು ಕೊಟ್ಟು ಸಂಭ್ರಮಿಸಿದರು.


ಪುಟಾಣಿಗಳು ಹಾಡು ಮತ್ತು ನೃತ್ಯದ ಮೂಲಕ ಎಲ್ಲರನ್ನು ಮನರಂಜಿಸಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಲಲಿತಾ ಭಟ್ ಮತ್ತು ಸುಶ್ರಾವ್ಯ ಸಹಕರಿಸಿದರು. ವಿದ್ಯಾರ್ಥಿಗಳಾದ ವೈಶಾವಿ ಮತ್ತು ಲಮಿಹ ನಿರೂಪಿಸಿದರು. ಎಲ್ಲಾ ಶಿಕ್ಷಕ-ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.