ಆಲೆಟ್ಟಿ :ಪಂಜಿಮಲೆ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಆಮಂತ್ರಣ ಪತ್ರ ಬಿಡುಗಡೆ

0

ಆಲೆಟ್ಟಿ ಪಂಜಿಮಲೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಫೆ.19-20 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ಜ.14 ರಂದು ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ದೇವಸ್ಥಾನ ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ, ಕುಡೆಕಲ್ಲು ಮಹಮ್ಮಾಯಿ ದೇವಸ್ಥಾನದ ಸಮಿತಿಯ ಅಧ್ಯಕ್ಷ ವಾಸುದೇವ ಗೌಡ ಕುಡೆಕಲ್ಲು,ದೇವಸ್ಥಾನದ ವ್ಯ.ಸ.ಸದಸ್ಯರಾದ ಜಗದೀಶ್ ಸರಳಿಕುಂಜ, ಸತೀಶ್ ಕುಂಭಕ್ಕೋಡು, ಅಚ್ಚುತ ಮಣಿಯಾಣಿ ಆಲೆಟ್ಟಿ, ಶ್ರೀಮತಿ ಮಮತಾ ಮುಕುಂದ ನಾರ್ಕೋಡು, ಶ್ರೀಮತಿ ನಳಿನಿ ನಾರಾಯಣ ರೈ ಆಲೆಟ್ಟಿ ಹಾಗೂ ಸ್ಥಳೀಯ ರಾದ ಗೋವಿಂದ ಭಟ್ ಎಲಿಕ್ಕಳ, ಪವಿತ್ರನ್ ಗುಂಡ್ಯ, ನಾರಾಯಣ ರೈ ಆಲೆಟ್ಟಿ, ಪುರುಷೋತ್ತಮ ದೋಣಿಮೂಲೆ, ಮಲ್ಲೇಶ್ ಕುಡೆಕಲ್ಲು,ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಭ.ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.