ಜ. 19: ಅಯ್ಯನಕಟ್ಟೆ ಜಾತ್ರೋತ್ಸವ

0

ಆಮಂತ್ರಣ ಪತ್ರ ವಿತರಣಾ ಅಭಿಯಾನ

ಜ. 26ರಿಂದ ಜ. 29ರ ತನಕ ನಡೆಯಲಿರುವ ಅಯ್ಯನಕಟ್ಟೆ ಜಾತ್ರೋತ್ಸವದ ಆಮಂತ್ರಣ ಪತ್ರ ವಿತರಣಾ ಅಭಿಯಾನ ಜ. 19ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ಜ. 17ರಂದು ಶ್ರೀ ಉಳ್ಳಾಕುಲು ಸನ್ನಿಧಿ ಮೂರುಕಲ್ಲಡ್ಕದಲ್ಲಿ ನಡೆಯಿತು. ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಪ್ರಸಾದ ಕಾಂಚೋಡು, ಅಧ್ಯಕ್ಷ ಶ್ರೀನಾಥ್ ರೈ ದೋಳ್ತೋಡಿ, ಕಾರ್ಯಾಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಕಿಲಂಗೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಗೌರವ ಸಲಹೆಗಾರರು, ವಿವಿಧ ಸಮಿತಿಗಳ ಸಂಚಾಲಕರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.