ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ, *ಶ್ರೀ ದೇವರ ಬಲಿ ಹೊರಟು ಉತ್ಸವ ,ನೃತ್ಯ ಬಲಿ, *ಇಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

0

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿ ,ಸಂಭ್ರಮದಿಂದ ನಡೆಯುತ್ತಿದೆ.ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಶ್ರೀ ದೇವರ ನೃತ್ಯ ಬಲಿ ನಡೆಯಿತು.

ನಂತರ ಅನ್ನಸಂತರ್ಪಣೆ ನಡೆಯಿತು.ಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ ,ವಸಂತ ಕಟ್ಟೆ ಪೂಜೆ ನಡೆಯಲಿದೆ.ಜ.,19 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತಕಟ್ಟೆ ಪೂಜೆ,ಸವಾರಿ ಹೋಗಿ ಬಂದು ಬೆಡಿಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ ನಡೆಯಲಿದೆ.ರಾತ್ರಿ ಗಂಟೆ 10.30 ಕ್ಕೆ ಮಹಾಪೂಜೆ ,ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ,ಶಯನೋತ್ಸವ,ಕವಾಟ ಬಂಧನ,ಅನ್ನಸಂತರ್ಪಣೆ ನಡೆಯಲಿದೆ.ಜ.20 ರಂದು ಬೆಳಿಗ್ಗೆ ಕವಾಟೋದ್ಘಾಟನೆ ,ಶ್ರೀ ದೇವರಿಗೆ ತೈಲಾಭಿಷೇಕ,ಪಂಚಾಮೃತಾಭಿಷೇಕ,ಸೀಯಾಳಾಭಿಷೇಕ,ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.ಮಧ್ಯಾಹ್ನ ಗಂಟೆ 12.00 ಕ್ಕೆ ತುಲಾಭಾರ ಸೇವೆ,ಯಾತ್ರಾ ಹೋಮ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ,ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ,ಅವಭೃತ ಸ್ನಾನ ಆಗಿ ದೇವಸ್ಥಾನಕ್ಕೆ ಬಂದು ಧ್ವಜಾವರೋಹಣ ,ಮಹಾಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ .ನಂತರ ಉಳ್ಳಾಕುಲು,ಮೈಷಂತಾಯ ದೈವದ ಭಂಡಾರ ತೆಗೆಯುವುದು.

ಜ.21 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಮಹಾಗಣಪತಿ ಹೋಮ,ಪಂಚವಿಂಶತಿ ಕಲಶ ಪೂಜೆ,ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ ನಡೆಯಲಿದೆ.ಪ್ರಸಾದ ವಿತರಣೆ ಪಿಲಿಭೂತದ ಭಂಡಾರ ತೆಗೆಯುವುದು.ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ,ಕಲಶಾಭಿಷೇಕ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ,ಮಹಾಅನ್ನಸಂತರ್ಪಣೆ ನಡೆಯಲಿದೆ.ಅ.ಗಂಟೆ 3.00 ರಿಂದ ಪಿಲಿಭೂತದ ನೇಮೋತ್ಸವ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಶ್ರೀ ಕಲ್ಲು ರ್ಟಿ, ಕಲ್ಕುಡ ದೈವದ ನೇಮ ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.