ಸುಬ್ರಹ್ಮಣ್ಯ: ಯುವ ಸಮ್ಮೇಳನ ಮತ್ತು ತರಬೇತಿ ಕಾರ್ಯಗಾರ, ರಾಜ್ಯ ಪ್ರಶಸ್ತಿ ಪ್ರದಾನ, *ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಿಂದ ಉದ್ಘಾಟನೆ*

0

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘಟನೆಗಳ ಮುಖಾಂತರ ಸುಬ್ರಹ್ಮಣ್ಯ ದ ವಲ್ಲೀಶ ಸಭಾಭವನದಲ್ಲಿ ಯುವ ಸಮ್ಮೇಳನ ಮತ್ತು ತರಬೇತಿ ಕಾರ್ಯಗಾರ, ರಾಜ್ಯ ಪ್ರಶಸ್ತಿ ಪ್ರದಾನ ಇಂದು ನಡೆಯಿತು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಚಿವ ಎಸ್ ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಡಾ.ಎಸ್ ಬಾಲಾಜಿ, ದ.ಕ ಜಿಲ್ಲಾ ಯುವ ಜನ ಒಕ್ಕೂಟ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯ ಮನೋಹರ ರೈ, ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಎ.ಪಿ.ಯಂ.ಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಕೆ.ಎಸ್ .ಎಸ್ ಕಾಲೇಜು ಪ್ರಾಂಶುಪಾಲ ದಿನೇಶ್ ಪಿ ಟಿ, ಎಸ್ ಎಸ್ ಪಿ ಯು ಕಾಲೇಜು ಪ್ರಾಂಶುಪಾಲ ಸೋಮಶೇಖರ ನಾಯಕ್, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರುಗಳಾದ ರಾಜೇಶ್‌ ಎನ್ ಎಸ್, ಗಿರೀಶ್ ಪೈಲಾಜೆ ಹಾಗೂ ವಿವಿಧ ಯುವಜನ ಒಕ್ಕೂಟದ ಪದಾಧಿಕಾರಿಗಳು, ತಾಲೂಕು ಯುವ ಜನ ಸಂಯುಕ್ತ ಮಂಡಳಿಯ ಅಧ್ಯಕ್ಷರು ವೇದಿಕೆಯಲ್ಲಿದ್ದರು.

ಸಭೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆರಂಭದಲ್ಲಿ ಸಚಿವದ್ವಯರು ವಿವೇಕ ರಥಕ್ಕೆ ಮಾಲಾರ್ಪಣೆ ಮಾಡಲಾಯಿತು.