ಪಂಜ: ನಾಪತ್ತೆಯಾದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

0


ಜನವರಿ 16 ರಂದು ಮನೆಯಿಂದ
ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಜ.19 ರಂದು ಪಂಜ ಸಮೀಪದ
ಬಾವಿಯಲ್ಲಿ ಶವವಾಗಿ ಪತ್ತೆಯಾದ
ಘಟನೆ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ.ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ಬಾರದಿದ್ದುದರಿಂದ ಮನೆಯವರು ಹುಟುಕಾಟ ನಡೆಸಿದ್ದಾರೆ.ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ
ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು.ಮನೆಯವರು ‍ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ತೆರಳಿದ್ದಾರೆ. ಸಾವಿನ ಕುರಿತು
ಪೋಲೀಸ್ ತನಿಖೆ ನಂತರ ಸ್ಪಷ್ಟ ಮಾಹಿತಿ ದೊರಕಲಿದೆ.
ಮೃತರು ಪುತ್ರರಾದ ಜಯಂತ, ಪ್ರಕಾಶ್, ಗಿರೀಶ್, ಪುತ್ರಿ ಜಯಂತಿ ಹಾಗೂ ಕುಟುಂಬಸ್ಥರನ್ನು ಆಗಲಿದ್ದಾರೆ.