ಜ. 29 ರಂದು ಸುದ್ದಿ ಸೌಹಾರ್ದ ಸಹಕಾರಿ ಸಂಘದ ಸುಳ್ಯ ಶಾಖೆಯ ಉದ್ಘಾಟನೆ

0


ಸುದ್ದಿ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ ನೂತನ ಸುಳ್ಯ ಶಾಖೆಯ ಉದ್ಘಾಟನೆ ಹಾಗೂ ಸುದ್ದಿ ಕೃಷಿ ಸೇವಾ ಕೇಂದ್ರದ ಕಚೇರಿ ಉದ್ಘಾಟನೆ ಜ. 29ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಸುಳ್ಯದ ದ್ವಾರಕಾ ಹೋಟೆಲ್ ಬಳಿಯ ರಾಜಶ್ರೀ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ ಎಂದು ಸುದ್ದಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ.ಯು.ಪಿ. ಶಿವಾನಂದ ಹೇಳಿದ್ದಾರೆ.

ಜ.೨೦ ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಯಕ್ರಮದ ವಿವರ ನೀಡಿದರು.

ಶಾಖೆ ಉದ್ಘಾಟನೆ ಪೂರ್ವಭಾವಿಯಾಗಿ ಜ.28ರಂದು ಬೆಳಿಗ್ಗೆ ಸಂಸ್ಥೆಯ ನೂತನ ಕಚೇರಿಯಲ್ಲಿ ಗಣಪತಿ ಹವನ ನಡೆಯಲಿದೆ.

ಜ.29 ರಂದು ಸುದ್ದಿ ಸಹಕಾರಿ ಸಂಘದ ಸುಳ್ಯ ಶಾಖೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸುದ್ದಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ.ಯು.ಪಿ. ಶಿವಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.


ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ| ರೇಣುಕಾಪ್ರಸಾದ್ ಕೆ.ವಿ. ಲಾಕರ್ ಉದ್ಘಾಟಿಸಲಿರುವರು. ಸುಳ್ಯ ತಾಲೂಕು ಮಹಿಳಾ ವಿವಿಧೋzಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ ಠೇವಣಿ ಪತ್ರ ವಿತರಣೆ ಮಾಡಲಿದ್ದಾರೆ. ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸಾಲಪತ್ರ ವಿತರಣೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ವಿದ್ಯಾರಶ್ಮಿ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಟಿಎಪಿಸಿಎಂಎಸ್ ಸುಳ್ಯ ಮತ್ತು ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ. ಜಯರಾಮ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಮಂಗಳೂರು ಇದರ ಹಿರಿಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ, ಸುಳ್ಯ ರಾಜಶ್ರೀ ಕಾಂಪ್ಲೆಕ್ಸ್ ಮಾಲಕ, ಇಂಜಿನಿಯರ್ ಕೃಷ್ಣ ರಾವ್ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ಸುದ್ದಿ ಕೃಷಿ ಸೇವಾ ಕೇಂದ್ರದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಲಿರುವುದು. ಸುಳ್ಯ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಹಾಗೂ ಪಂಜ ರೈತ ಉತ್ಪದಕ ಕಂಪನಿ ಅಧ್ಯಕ್ಷ ತೀರ್ಥನಂದ ಕೋಡಂಕೇರಿ ಉದ್ಘಾಟಿಸಲಿರುವರು.
ಸುದ್ದಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸಂಪೂರ್ಣ ಗಣಕೀಕೃತ ಸೇವಾ ಸೌಲಭ್ಯಗಳು, ನಿರಖು ಠೇವಣಿ 45 ರಿಂದ 90ದಿನಗಳಿಗೆ – 6%, 91 ದಿನಗಳಿಂದ 180ದಿನಗಳಿಗೆ – 6.75%,181ದಿನಗಳಿಂದ 364 ದಿನಗಳಿಗೆ – 8%, ಒಂದು ವರ್ಷ ಮತ್ತು ಮೇಲ್ಪಟ್ಟು -9%, ಹಿರಿಯ ನಾಗರಿಕರಿಗೆ ಶೇಕಡಾ ೦.5% ಹೆಚ್ಚುವರಿ ಬಡ್ಡಿ ನೀಡಲಾಗುವುದು.
ಭೂ ಅಡಮಾನ ಸಾಲ, ವೇತನ ಆಧಾರಿತ ಸಾಲ, ಭೂಮಿ ಖರೀದಿ ಸಾಲ, ಜಾಮೀನು ಮತ್ತು ವ್ಯಾಪಾರ ಸಾಲ, ಮನೆ ನಿವೇಶನ ಖರೀದಿ ಸಾಲ, ಮನೆ ನಿರ್ಮಾಣ ಸಾಲ, ವಾಹನ ಸಾಲ, ಚಿನ್ನಾಭರಣ ಈಡಿನ ಸಾಲ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ಹಾಗೂ ತ್ವರಿತವಾಗಿ ಕ್ಲಪ್ತ ಸಮಯದಲ್ಲಿ ನೀಡಲಾಗುವುದು.
ವಾರ್ಷಿಕ 33.75ಕೋಟಿಗೂ ಮಿಕ್ಕಿ ವ್ಯವಹಾರ, ಇ-ಸ್ಟಾಂಪಿಂಗ್ ಸೇವಾ ಸೌಲಭ್ಯವಿದೆ.2021-22 ಸಾಲಿನಲ್ಲಿ ರೂ.32.37 ಲಕ್ಷ ಲಾಭ ಗಳಿಸಿದೆ ಎಂದವರು ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸುದ್ದಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಬಂಟ್ವಾಳ್, ಈಶ್ವರ ವಾರಣಾಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರೇಂದ್ರ, ಸುಳ್ಯ ಶಾಖಾ ಮ್ಯಾನೇಜರ್ ಚೇತನ್ ಬುಡ್ಲೆಗುತ್ತು, ಸಲಹಾ ಸಮಿತಿ ಸದಸ್ಯ ಯಶ್ವಿತ್ ಕಾಳಮ್ಮನೆ ಇದ್ದರು.