ಸುಳ್ಯ ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ವರ್ಷಂಪ್ರತಿ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜ.29 ರಂದು ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿರುವುದು. ಬೆಳಗ್ಗೆ ಗಂಟೆ 8.30 ರಿಂದ ಸತ್ಯನಾರಾಯಣ ದೇವರ ಪೂಜೆಯು ಪ್ರಾರಂಭವಾಗಲಿರುವುದು. ಬಳಿಕ ಶಿವ ಪಂಚಾಕ್ಷರಿ ಭಜನಾ ಮಂಡಳಿ ರೆಂಜಾಳ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಗಂಟೆ 12.00 ರಿಂದ ಕೆ.ಇ.ರಾಮಕೃಷ್ಣ ಭಟ್ ಪೆರಾಜೆ ಯವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಗಲಿರುವುದು. ಅಪರಾಹ್ನ ಗಂಟೆ 2.00 ರಿಂದ ಗಾಣಿಗ ಸಮಾಜ ಬಾಂಧವರು ಮತ್ತು ಸಮುದಾಯದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ರವರು ತಿಳಿಸಿರುತ್ತಾರೆ.
Home Uncategorized ಜ.29: ಸುಳ್ಯದಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು...