ಜನವರಿ 21 ರಿಂದ 29 ರವರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

0

ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಜನವರಿ 21 ರಿಂದ 29 ರವರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ತಯಾರಿ ಪ್ರಯುಕ್ತ ಸುಳ್ಯ ಕ್ಷೇತ್ರದಾದ್ಯಂತ ಈಗಾಗಲೆ ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮುಂದಿನ ಹಂತವಾಗಿ ಕ್ಷೇತ್ರದಾದ್ಯಂತ ಜನವರಿ 21 ರಿಂದ 29 ರವರೆಗೆ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಡೆಯಲಿದೆ‌. ಅಭಿಯಾನದಲ್ಲಿ ವಿವಿಧ ಸ್ತರದ ಜವಾಬ್ದಾರಿಯ ಪ್ರಮುಖರು, ಕಾರ್ಯಕರ್ತರು ಕ್ಷೇತ್ರದ 231 ಬೂತ್‌ಗಳ ಎಲ್ಲಾ ಮನೆಗಳ ಸಂಪರ್ಕ, ಪ್ರತೀ ಮನೆಗೆ ಸರಕಾರದ ಸಾಧನೆಗಳ ಕರಪತ್ರ ಮತ್ತು ಸ್ಟಿಕ್ಕರ್ ವಿತರಣೆ, 8000090009 ಸಂಖ್ಯೆಗೆ ಮಿಸ್ ಕಾಲ್ ಕೊಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸಲಾಗುವುದು. ಈ ಸಂದರ್ಭದಲ್ಲಿ ಸರ್ಕಾರದ ಯೋಜನೆಯ ಫಲಾನುಭವಿಗಳ ಸಂಪರ್ಕ, ಪ್ರತೀ ಬೂತ್ ವ್ಯಾಪ್ತಿಯಲ್ಲಿ 10 ಗೋಡೆ ಬರಹಗಳನ್ನು ಮಾಡುವುದು.
ಜನವರಿ 29 ಆದಿತ್ಯವಾರ ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಸೇರಿ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರ ಮನ್ ಕಿ ಬಾತ್ ಆಲಿಸುವ ಕಾರ್ಯಕ್ರಮ ಸೇರಿದಂತೆ ಅನೇಕ ಸಂಘಟನಾತ್ಮಕ ಕಾರ್ಯಗಳನ್ನು ಈ ಸಂದರ್ದದಲ್ಲಿ ಹಮ್ಮಿಕೊಳ್ಳಲಾಗಿದೆ. ಜ 21ರಂದಿ ಬೆಳಿಗ್ಗೆ ಗಂ .10.30 ಕ್ಕೆ ಸುಳ್ಯ ಬಿಜೆಪಿ ಕಛೇರಿಯ ಬಳಿ ಸಚಿವರಾದ ಎಸ್ ಅಂಗಾರ ಅವರು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು
ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆ ತಿಳಿಸಿದೆ