ಜ.29: ಜಾಲ್ಸೂರು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಜ.29ರಂದು ಜರುಗಲಿದೆ.
ಬೆಳಿಗ್ಗೆ 9-00ರಿಂದ 12 ತೆಂಗಿನಕಾಯಿ ಗಣಪತಿ ಹವನ, 10-00ರಿಂದ ನಾಗಸಾನಿಧ್ಯದಲ್ಲಿ ನಾಗತಂಬಿಲ, 11-00ರಿಂದ ಪಾದುಕಾಪೂಜೆ, ಕನಕಮಜಲಿನ ಸ್ವರ್ಣಾಂಜಲಿ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನೆ, ಮಧ್ಯಾಹ್ನ 12.30ರಿಂದ ಶ್ರೀ ಗುರುರಾಘವೇಂದ್ರ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.
ಸಂಜೆ 6.30ರಿಂದ ನಾಗಸಾನಿಧ್ಯದಲ್ಲಿ ಆಶ್ಲೇಷ ಬಲಿ, ರಾತ್ರಿ7-00ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.