ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರತಿಭಾ ದಿನ

0

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ 15ನೇ ವರ್ಷದ ಜ್ಞಾನಸಂಭ್ರಮದ ಅಂಗವಾಗಿ ಪ್ರತಿಭಾ ದಿನ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಪಂಜ ಪಂಚಶ್ರೀ ಜೇಸಿಐ ಅಧ್ಯಕ್ಷ ಲೋಕೇಶ್ ಅಕ್ರಿಕಟ್ಟೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮ ನಿರೂಪಕ ಹರ್ಷಿತ್ ಮಿತ್ತಡ್ಕ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ರಮ್ಲತ್ ಬೀಬಿ ಬಹುಮಾನ ವಿತರಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಶರತ್ ಕಲ್ಲೋಣಿ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು . ಉಪನ್ಯಾಸಕರುಗಳಾದ ಚಂದ್ರಶೇಖರ್ ಅಲೆಟ್ಟಿ, ಬೃಂದಾ ಕುಂಜಾಡಿ, ಗೀತಾ ಬಾಲಚಂದ್ರ ಉಪಸ್ಥಿತರಿದ್ದರು.