ಜ27 ರಿಂದ ಅನ್ಸಾರುಲ್ ಮುಸ್ಲಿಮೀನ್ ವತಿಯಿಂದ ಮೂರು ದಿನಗಳ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ

0


ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಗಾಂಧಿನಗರ ಸುಳ್ಯ ಇದರ ವತಿಯಿಂದ ಮೂರು ದಿನಗಳ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ಗಾಂಧಿನಗರ ಎಂ ಐ ಮದರಸ ಸಭಾಂಗಣದಲ್ಲಿ ಜ.27,28,29 ರಂದು ನಡೆಯಲಿದೆ.
ಜ.27 ರಂದು ಸಯ್ಯದ್ ಕುಂಞಿ ಕೋಯ ತಂಙಳ್ ಉದ್ಘಾಟಿಸಲಿದ್ದಾರೆ.ಹಾಫಿಳ್ ಅಲ್ ಹಾಜ್ ಮಶೂದ್ ಸಖಾಫಿ ಗುಡಲ್ಲೂರ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಗಾಂಧಿನಗರ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಕೆ ಎಂ ಮುಸ್ತಫಾನ ಅಧ್ಯಕ್ಷತೆ ವಹಿಸಲಿದ್ದಾರೆ.
ಜ.28 ರಂದು ಸಯ್ಯದ್ ತಾಹಿರುಲ್ ಅಹದಲ್ ತಂಙಳ್ ಸಹದಿ ದುವಾಶಿರ್ವಚನ ಮಾಡಲಿದ್ದಾರೆ.
ಅಲ್ ಹಾಜ್ ಅಬ್ದುಲ್‌ ರಜಾಕ್ ಅಬ್ರಾರಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಅನ್ಸಾರಿಯ ಎಜುಕೇಶನ್ ಸೆಂಟರ್ ಅಧ್ಯಕ್ಷ ಹಾಜಿ ಅಬ್ದುಲ್‌ ಮಜೀದ್ ಜನತಾ ಅಧ್ಯಕ್ಷತೆ ವಹಿಸಲಿದ್ದಾರೆ.
ಜ.29 ರಂದು ಸಮಾರೋಪ ಸಮಾರಂಭ ಹಾಗೂ ಸಾಮೂಹಿಕ ಪ್ರಾರ್ಥನ‌ ಸಂಗಮ ಕಾರ್ಯಕ್ರಮ ನಡೆಯಲಿದೆ ದ.ಕ ಜಿಲ್ಲಾ ಖಾಝಿ‌ ಸಯ್ಯದ್ ಪಝಲ್ ಕೊಯಮ್ಮ ತಂಙಳ್ ಕೂರ ದುವಾಶಿರ್ವಚನ ನೀಡಲಿದ್ದಾರೆ
ಗಾಂಧಿನಗರ ಕೆಂದ್ರ ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಕಾಮಿಲ್ ಸಖಾಫಿ ವಯನಾಡ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಹಾಜಿ ಕೆ ಹೆಚ್ ಅಬ್ದುಲ್‌ ಶುಕೂರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.