ಜ.31:ಪೈಂದೋಡಿ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಸ್ಥಾನ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಜ. 31.ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ಹಿರಿತನದಲ್ಲಿ ಜರುಗಲಿದೆ. ಪೂ.ಗಂ.7 ರಿಂದ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಆಶ್ಲೇಷ ಬಲಿ ಪೂಜೆ, ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ,ಭಜನೆ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಗಂ.8.30ಕ್ಕೆ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ.
ಜ.30 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಹಸಿರು ಕಾಣಿಕೆಯನ್ನುದೇವಳಕ್ಕೆ
ಮೆರವಣಿಗೆಯಲ್ಲಿ ತರಲಾಗುವುದು. ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.