ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.21 ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು, ಮೈಷಂತಾಯ ದೈವಗಳ ನೇಮೋತ್ಸವ ನಡೆಯಿತು.
ಮಧ್ಯಾಹ್ನ ಪಿಲಿಭೂತದ ನೇಮೋತ್ಸವ ಪ್ರಸಾದ ವಿತರಣೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ವಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ಪಿಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೆ, ಶ್ರೀಮತಿ ಭಾಗ್ಯಲಕ್ಷ್ಮಿ, ಶ್ರೀಮತಿ ಯಶೋಧ ಎ.ಎಸ್. ಸಿಬ್ಬಂದಿ ವರ್ಗ ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.