ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅದ್ದೂರಿ ಸಾಂಪ್ರದಾಯಕ ಕಾಲೇಜು ವಾರ್ಷಿಕೋತ್ಸವ ಆಚರಣೆ

0


ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಸಾಂಪ್ರದಾಯವಾಗಿ ಅರ್ಥಪೂರ್ಣವಾಗಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ವಾರ್ಷಿಕೋತ್ಸವಕ್ಕೆ ಮುಖ್ಯ ಅತಿಥಿ ಸನ್ಮಾನ್ಯ ವಿಧಾನ ಪರಿಷತ್ ಸದಸ್ಯರು ಪದವಿದರ ಶಿಕ್ಷಕರ ಕ್ಷೇತ್ರ ಶ್ರೀ ಎಸ್ ಎಲ್ ಭೋಜಗೌಡ ಮುಖ್ಯ ಅತಿಥಿಯಾಗಿ ಆಗಮಿಸಿದರು. ಕಾರ್ಯಕ್ರಮವು ಪ್ರಾರ್ಥನೆ ಮತ್ತು ಜ್ಯೋತಿ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ಗೊಂಡಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ. ಆರ್ ಸ್ವಾಗತ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ರವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಅತಿಥಿ ಮತ್ತು ಕಾಲೇಜಿನ ಸಿಇಓ ಆದಂತಹ ಡಾ.ಉಜ್ವಲ್ ಯು ಜೆ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಸನ್ಮಾನ್ಯ ವಿಧಾನ ಪರಿಷತ್ ಸದಸ್ಯರು ಪದವಿದರ ಶಿಕ್ಷಕರ ಕ್ಷೇತ್ರ ಎಸ್ ಎಲ್ ಭೋಜೇಗೌಡರು ತಮ್ಮ ಮಾತಿನಲ್ಲಿ ಕಾಲೇಜಿನ ಪ್ರಗತಿ, ಮಕ್ಕಳ ಭವಿಷ್ಯದ ಬಗ್ಗೆ ಮೆಚ್ಚುಗೆ ಸೂಚಿಸಿದರು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ.ರೇಣುಕಾ ಪ್ರಸಾದ್ ಕೆ ವಿ ಅವರು ಕಾಲೇಜು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಕಾಲೇಜಿನ ಉನ್ನತಿಯ ಬಗ್ಗೆ ಪ್ರಶಂಸಿಸಿದರು.ಕಾಲೇಜಿನ ಸಿ ಇ ಓ ಡಾ. ಉಜ್ವಲ್ ಯು ಜೆ ರವರು ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಮಕ್ಕಳ ವಾರ್ಷಿಕ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಮತ್ತು ವ್ಯಾಸಂಗ ಕ್ಷೇತ್ರದ ಬಹುಮಾನಗಳನ್ನು ವಿತರಿಸಲಾಯಿತು. ವಾರ್ಷಿಕ ಕ್ರೀಡಾ ವರದಿಯನ್ನು ಉಪನ್ಯಾಸಕಿ ಅಭಿಜ್ಞಾ ವಾಚಿಸಿದರು. ಉಪನ್ಯಾಸಕಿ ಬೀನ ರವರು ಸಾಂಸ್ಕೃತಿಕ ವರದಿಯನ್ನು ವಾಚಿಸಿದರು. ಉಪನ್ಯಾಸಕಿ ವಿದ್ಯಾಶ್ರೀ ವಂದನಾರ್ಪಣೆಯನ್ನು ಸಲ್ಲಿಸಿದರು. ತದನಂತರ ಸಾಂಸ್ಕೃತಿಕ ಕಾರ್ಯಕ್ರಮದ ಆಚರಣೆ ಅದ್ಭುತವಾಗಿ ನೆರವೇರಿತು.