ಬಳ್ಪ: ಮರದಿಂದ ಬಿದ್ದು ವ್ಯಕ್ತಿ ಸಾವು

0

ಬಳ್ಪ ಗ್ರಾಮದ ಕುಂಜತ್ತಾಡಿ ಮನೆ ದಾಮೋದರ ಗೌಡ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜ. 23 ರಂದು ನಡೆದಿದೆ. ಅವರಿಗೆ 57 ವರ್ಷ ವಯಸ್ಸಾಗಿತ್ತು . ಎಂದಿನಂತೆ ತಮ್ಮ ಮನೆಯ ಬಳಿಯಿರುವ ಅವರ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಬಳಿಕ ಅವರ ಮನೆಯ ಬಳಿ ರಾಮ ಪತ್ರೆ ಕೊಯ್ಯಲು ಮರವನ್ನು ಹತ್ತಿ ಕೊಯ್ಯುತ್ತಿದ್ದಾಗ ಅವರು ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದಿದ್ದು, ಅವರನ್ನು ಕೂಡಲೇ ಸ್ಥಳೀಯರ ನೆರವಿನಿಂದ ಕಡಬ ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ರುಕ್ಮಿಣಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.