ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

0

ಜಾಲ್ಸೂರು ಗ್ರಾಮದ ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ 74ನೇ ವರ್ಷದ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.
ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಳಿನಿ ಜಗನ್ನಾಥ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಾಲ್ಸೂರು ಸ್ವಚ್ಛಕಿರಣ ತಂಡ ಒಂದನೇ ವರ್ಷದ ಸಲುವಾಗಿ ಗಿಡ ನೆಡಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಛಕಿರಣ ತಂಡದ ಅಧ್ಯಕ್ಷ ಕೃಷ್ಣಪ್ಪ ನಾಯ್ಕ ಮಹಾಬಲಡ್ಕ, ವಿನೋದ್ ಮಹಾಬಲಡ್ಕ, ಕಾರ್ಯದರ್ಶಿ ಸುಚಿತ್ರ ಸೇರಿದಂತೆ ಸ್ವಚ್ಛಕಿರಣ ಗುಂಪಿನ ಸದಸ್ಯರುಗಳು, ಹಾಗೂ ಅಂಗನವಾಡಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ಅವರು ಪ್ರಾರ್ಥಿಸಿ, ಸ್ವಾಗತಿಸಿ, ವಂದಿಸಿದರು. ಸಹಾಯಕಿ ಶಾರದ
ಸಹಕರಿಸಿದರು.