ಜಾಲ್ಸೂರು: ಗಣರಾಜ್ಯೋತ್ಸವ ಪ್ರಯುಕ್ತ ಸಂಜೀವಿನಿ ಒಕ್ಕೂಟದಿಂದ ಸ್ವಚ್ಛತೆ

0

ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ಜ.26ರಂದು ಜರುಗಿತು.
ಜಾಲ್ಸೂರು ಗ್ರಾ.ಪಂ. ವಠಾರದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿದ ಬಳಿಕ ಗ್ರಾ.ಪಂ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಸೇರಿ ಸ್ವಚ್ಛತಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ, ಗ್ರಾ.ಪಂ. ಸದಸ್ಯರುಗಳಾದ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಮುಜೀಬ್ ಪೈಚಾರು ಸೇರಿದಂತೆ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು , ಘನತ್ಯಾಜ್ಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.