ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡ ಆರೋಪಿಗಳು ಸೌದಿಯಲ್ಲಿ ಪತ್ತೆ ವದಂತಿ

0

ಕಾರ್ಯಾಚರಣೆ ತೀವ್ರ ಗೊಳಿಸಿದ ಎನ್ ಐ ಎ


ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್. ಐ.ಎ. ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆಂದು ಹೇಳಲಾಗುತ್ತಿದೆ.

ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದು ಈ ಮಧ್ಯೆ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಘೋಷಿಸಿದ್ದರು.

ಇದೀಗ ಇಬ್ಬರೂ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದ್ದು ವಿಚಾರಣೆಗಾಗಿ ಭಾರತಕ್ಕೆ ಕರೆತರುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here