ಕೆಎಸ್‌ಎಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ತೆರಿಗೆ ಮಾಹಿತಿ ಕಾರ್ಯಕ್ರಮ

0


ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ತೆರಿಗೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ದಿನೇಶ್ ಪಿ. ಟಿ. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ತೆಯ ಹಳೆ ವಿದ್ಯಾರ್ಥಿಯೂ ಆಗಿರುವ ಚಾರ್ಟಡ್ ಅಕೌಂಟೆಂಟ್ ಲಕ್ಷ್ಮೀನಾರಾಯಣ ಹೊಳ್ಳ ಇವರು ಅಂತಾರಾಷ್ಟ್ರೀಯ ತೆರಿಗೆ ಬಗ್ಗೆ ಮಾಹಿತಿ ನೀಡಿದರು.
ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕ ಡಾ. ಗೋವಿಂದ ಎನ್.ಎಸ್., ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀಮತಿ ಲತಾ ಬಿ. ಟಿ., ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪುಷ್ಪ. ಡಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಧನುಷ್ ಉಪಸ್ಥಿತರಿದ್ದರು. ಕು.ವಿಂಧ್ಯಾ ಸ್ವಾಗತಿಸಿದರು. ಹರ್ಷಿತ್ ಎ.ಸಿ ವಂದಿಸಿದರು.