ನಾಳೆ ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ 2023

0

ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿ ಹಾಗೂ ಶ್ರೀ ಶ್ರೀ ಅಭಿನವ ಮಂಜುನಾಥ ಮಹಾಸ್ವಾಮಿಗಳಿಂದ ಆಶೀರ್ವಚನ, ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ

ಹಿಂದು ಹೃದಯ ಸಂಗಮ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ಜನವರಿ 29ರಂದು ಬೃಹತ್ ಹಿಂದೂ ಹೃದಯ ಸಂಗಮ 2023 ಸಮಾರಂಭ ಅಪರಾಹ್ನ ರಥಬೀದಿಯಲ್ಲಿ ನಡೆಯಲಿದೆ. ಆರಂಭದಲ್ಲಿ ಅಪರಾಹ್ನ 2.30 ಕ್ಕೆ ಸರಿಯಾಗಿ ಕುಮಾರಧಾರ ದಿಂದ ಬೃಹತ್ ಶುಭಾಯತ್ರೆ ನಡೆಯಲಿದ್ದು ಸುಮಾರು 10 ತಂಡಗಳು ಕುಣಿತ ಭಜನೆ ಯೊಂದಿಗೆ ಕುಮಾರಧಾರ ಮಹದ್ವಾರದಿಂದ ರಥ ಬೀದಿವರೆಗೆ ವೈಭವದ ಶೋಭ ಯಾತ್ರೆ ನಡೆಯಲಿದೆ. ಬಳಿಕ ರಥ ಬೀದಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ ಸದಾಶಿವ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುಪುರ ವಜ್ರದೇಹಿ ಮಠದ ಪೀಠಾಧಿಪತಿ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿ ಹಾಗೂ ಹುಕ್ಕೇರಿ ಇಂಚಗೇರಿ ಸಂಸ್ಥಾನ ಮಠದ ಪೂಜ್ಯರಾದ ಶ್ರೀ ಶ್ರೀ ಅಭಿನವ ಮಂಜುನಾಥ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ ಉಡುಪಿ ಜಿಲ್ಲೆಯ ಹಿಂ.ಜಾ.ವೇ ಸಹ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಇದರ ಅಧ್ಯಕ್ಷ ಡಾ। ಕೃಷ್ಣ ಪ್ರಸನ್ನ ಇವರ ಗೌರವ ಉಪಸ್ಥಿತಿ ಇರಲಿದೆ.

ಸುಳ್ಯ
ವಿಧಾನ ಸಭಾ ಕ್ಷೇತ್ರದ ಎಲ್ಲಾ ಹಿಂದೂ ಸಂಘಟನೆಗಳು ಕಾರ್ಯಕ್ರಮದೊಂದಿಗೆ ಕೈ ಜೋಡಿಸಲಿವೆ ಎಂದು ತಿಳಿದು ಬಂದಿದೆ.