ಕಾಂಚೋಡು ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 11ರಿಂದ ಫೆ. 14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಪರಮೇಶ್ವರಯ್ಯ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.