ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಯರ್ತೋಡಿ ದೇವಸ್ಥಾನದಲ್ಲಿ ಶ್ರಮದಾನ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ. ೩೧ರಿಂದ ಫೆ. ೯ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತೋತ್ಸವ ನಡೆಯಲಿದ್ದು, ಆ ಪ್ರಯುಕ್ತ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯ ನಡೆಯತು.

ಸುಳ್ಯದ ಗಾಂಧಿನಗರದಿಂದ ರಸ್ತೆಯ ಇಕ್ಕೆಲಗಳಲ್ಲಿ, ದೇವಸ್ಥಾನದ ಆವರಣದ ಸುತ್ತಮುತ್ತ ಬಂಟಿಂಗ್ಸ್ ಕಟ್ಟುವುದು, ಸ್ವಚ್ಛತಾ ಕಾರ್ಯಕ್ರಮ ಹಾಗೂ ಇನ್ನಿತರ ಕಾರ್ಯ ನಡೆಯಿತು. ಸುಳ್ಯದ ನ.ಪಂ. ವ್ಯಾಪ್ತಿಯ ಎಲ್ಲಾ ವಾರ್ಡ್ ಸಮಿತಿಯ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.