ಪೈಂದೋಡಿ ದೇವಳಕ್ಕೆ ಹಸಿರು ಕಾಣಿಕೆ ಸಮರ್ಪಣೆ:
( ನಾಳೆ) ಜ.31 ರಂದು ಪ್ರತಿಷ್ಠಾ ವಾರ್ಷಿಕೋತ್ಸವ

0

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಸ್ಥಾನ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಜ. 31.ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ಹಿರಿತನದಲ್ಲಿ ಜರುಗಲಿದೆ.

ಜ.30 ರಂದು ಹಸಿರು ಕಾಣಿಕೆ ಮೆರವಣಿಗೆ ನಡೆದು ದೇವಳಕ್ಕೆ ಸಮರ್ಪಣೆ ಗೊಂಡು ಪೂಜೆ ನೆರವೇರಿತು.ಜ.31ರಂದು ಪೂ.ಗಂ.7 ರಿಂದ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಆಶ್ಲೇಷ ಬಲಿ ಪೂಜೆ, ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಗಂ.8.30ಕ್ಕೆ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ.